Advertisement

ವಿದ್ಯುತ್‌ ತಂತಿ ಮೇಲೆ ಮರಗಳು: ಅಪಾಯ ಭೀತಿ

04:21 PM Jun 08, 2018 | Team Udayavani |

ಬೆಳ್ತಂಗಡಿ : ನಾವೂರು ಗ್ರಾಮದ ಕೈಕಂಬ-ಹತ್ಯಡ್ಕ ರಸ್ತೆ ಬದಿ ಬಾಗಿದ್ದು, ತೆರವುಗೊಳಿಸದಿದ್ದಲ್ಲಿ ಅಪಾಯ ಕಾದಿದೆ. ಕೆಲವು ಭಾಗಗಳಲ್ಲಿ ವಿದ್ಯುತ್‌ ಕಂಬಗಳ ಮೇಲೆ ಅಕೇಶಿಯಾ ಮರಗಳು ಆವರಿಸಿದ್ದು, ವಿದ್ಯುತ್‌ ಕಂಬಗಳು ಬೀಳುವ ಸಾಧ್ಯತೆ ಹೆಚ್ಚಾಗಿದೆ. ಮಳೆಗಾಲದಲ್ಲಿ ಗಾಳಿ-ಮಳೆಗೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಮೆಸ್ಕಾಂಗೆ ಹಲನವು ಬಾರಿ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಸ್ಥಳೀಯರು.

Advertisement

ಒಂದು ವೇಳೆ ತಂತಿ ಮೇಲೆ ಮರ ಬಿದ್ದಲ್ಲಿ ಕಂಬಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಹಾಗೂ 25ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್‌ ಕಡಿತಗೊಳಿಸುವ ಸಾಧ್ಯತೆಯೂ ಹೆಚ್ಚಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next