Advertisement

ಉಡುಪಿ ಜಿಲ್ಲೆಯ ಉದ್ಯಾವರದಲ್ಲೂ ಪವರ್‌ ಸ್ಟಾರ್‌ ಹವಾ !

06:56 PM Oct 29, 2022 | Team Udayavani |

ಕಟಪಾಡಿ: ಉಡುಪಿ ಜಿಲ್ಲೆಯಲ್ಲೂ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಹವಾ ಕಂಡು ಬರುತ್ತಿದ್ದು, ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉದ್ಯಾವರದಲ್ಲಿ ಅಂಧರ ಗೀತ ಗಾಯನ ನಡೆದಿದೆ.

Advertisement

ಶೃಂಗೇರಿಯ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದ ಕಲಾವಿದರನ್ನು ಆಹ್ವಾನಿಸಿದ ಸಾಕಷ್ಟು ಸಮಾಜಮುಖೀ ಚಟುವಟಿಕೆ ನಿರತ ಗುಡ್ಡೆಯಂಗಡಿ ಫ್ರೆಂಡ್ಸ್‌  ಗುಡ್ಡೆಯಂಗಡಿ ವತಿಯಿಂದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಶನಿವಾರ ಸಂಜೆ ಎಸ್‌ಡಿಎಂ ಬಳಿಯ ಇಮೇಜ್‌ ಬಿಲ್ಡಿಂಗ್‌ ಮುಂಭಾಗದಲ್ಲಿ ನಡೆದಿದ್ದು, ಸಂಘಟನೆಯ ಗೌರವಾಧ್ಯಕ್ಷ, ಅಧ್ಯಕ್ಷ, ಸದಸ್ಯರು ಗೌರವ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next