Advertisement

ಎಟಿಸಿ ಗೋಪುರಕ್ಕೆ ತ್ರಿವರ್ಣ ಕಳೆ

12:40 PM Aug 13, 2018 | Team Udayavani |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ನಿಯಂತ್ರಣ ಕೇಂದ್ರ (ಎಟಿಸಿ) ತ್ರಿವರ್ಣ ಬೆಳಕಿನಿಂದ ಕಂಗೊಳಿಸುತ್ತಿದೆ. 72ನೇ ಸ್ವಾತಂತ್ರ ದಿನದ ಅಂಗವಾಗಿ ಎಟಿಸಿ ಗೋಪುರವನ್ನು ತ್ರಿವರ್ಣ ಧ್ವಜವನ್ನು ಪ್ರತಿಬಿಂಬಿಸುವ ಕೇಸರಿ, ಬಿಳಿ ಮತ್ತು ಹಸಿರು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಇದು ರಾತ್ರಿ ವೇಳೆ ಆಕರ್ಷಕವಾಗಿ ಕಾಣುತ್ತಿದೆ.

Advertisement

ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಪ್ರಯಾಣಿಕರಲ್ಲಿ ರಾಷ್ಟ್ರಪ್ರೇಮ ಮೂಡಿಸಲು ಹಾಗೂ ಸ್ವಾತಂತ್ರ್ಯ ದಿನ ಆಚರಣೆಯ ಭಾಗವಾಗಿ ಈ ಬೆಳಕಿನ ಅಲಂಕಾರ ಮಾಡಲಾಗಿದೆ. ಸ್ವಾತಂತ್ರ ಸಪ್ತಾಹದುದ್ದಕ್ಕೂ ತ್ರಿವರ್ಣ ದೀಪಾಲಂಕಾರ ಇರಲಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣ ನಿಗಮದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next