Advertisement

ಬಂಗಾಳ; ಬಿಜೆಪಿ ಸೇರ್ಪಡೆಗೆ ಆಗಮಿಸಿದ್ದ TMC ಸಂಸದ ಮಂಡಲ್ ಗೆ ಟಿಎಂಸಿ ಮುತ್ತಿಗೆ, ಪ್ರತಿಭಟನೆ

01:14 PM Dec 26, 2020 | Nagendra Trasi |

ಕೋಲ್ಕತಾ: ಟಿಎಂಸಿ ವಿರುದ್ಧ ಬಂಡಾಯ ಸಾರಿದ್ದ ಪಕ್ಷದ ಸಂಸದರ ಕಾರನ್ನು ಬಿಜೆಪಿ ಕಚೇರಿ ಹೊರಭಾಗದಲ್ಲಿ ಟಿಎಂಸಿ ಕಾರ್ಯಕರ್ತರು ಅಡ್ಡಗಟ್ಟಿದ ಪರಿಣಾಮ, ಪೊಲೀಸರ ಸಮ್ಮುಖದಲ್ಲಿಯೇ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಶನಿವಾರ(ಡಿಸೆಂಬರ್ 26, 2020) ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಸಂಸದ ಸುನೀಲ್ ಮಂಡಲ್ ಇಂದು ಬೆಳಗ್ಗೆ ಕಾರಿನಲ್ಲಿ ಬಿಜೆಪಿ ಕಚೇರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ, ಘೋಷಣೆ ಕೂಗಿದರು. ತಳ್ಳಾಟ, ನೂಕಾಟದಿಂದ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಲು ಕಾರಣವಾಗಿದೆ ಎಂದು ವರದಿ ಹೇಳಿದೆ.

ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್ ಪಕ್ಷದ ಕೆಲವು ಪ್ರಭಾವಿ ಮುಖಂಡರು ಕಳೆದ ಶನಿವಾರ ಮಿಡ್ನಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮಮತಾ ಬ್ಯಾನರ್ಜಿ ಸರ್ಕಾರದ ಮಾಜಿ ಸಚಿವರಾದ ಸುನೀಲ್ ಮಂಡಲ್, ಸುವೇಂದು ಅಧಿಕಾರಿ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಕಚೇರಿ ಶೀಘ್ರ ಉದ್ಘಾಟನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next