Advertisement

ಟಿಎಂಸಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ: ರಾಜಕೀಯ ದ್ವೇಷವೇ ಕಾರಣವೆಂದ ಕುಟುಂಬ

09:09 AM Jul 02, 2023 | Team Udayavani |

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ ( ಜು.1 ರಂದು) ನಡೆದಿರುವುದು ವರದಿಯಾಗಿದೆ.

Advertisement

ಜಿಯಾರುಲ್ ಮೊಲ್ಲಾ ಮೃತ ಕಾರ್ಯಕರ್ತ.

ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗುಂಡಿನ ಗಾಯದಿಂದ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯದಿಂದ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಪೊಲೀಸರ ಬಳಿ ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೃತ ಕಾರ್ಯಕರ್ತನ ಮಗ, “ ನನ್ನ ತಂದೆಗೆ ಸಾಕಷ್ಟು ಶತ್ರುಗಳಿದ್ದರು. ಅವರ ಮೇಲೆ ರಾಜಕೀಯ ದ್ವೇಷವಿತ್ತು. ಅವರಿಗೆ ಪಕ್ಷದ ಇನ್ನೊಂದು ಬಣದಿಂದ ಹಲವು ಬಾರಿ ಬೆದರಿಕೆ ಹಾಕಲಾಗಿತ್ತು. ಕಳೆದ ಕೆಲ ದಿನಗಳಿಂದ ವಿವಿಧ ನಂಬರ್‌ ನಿಂದ ಬೆದರಿಕೆ ಕರೆಗಳು ಬರುತ್ತಿದ್ದವು. ನನ್ನ ತಂದೆ ಟಿಎಂಸಿ ಯುವ ಘಟಕದ ಸದಸ್ಯರಾಗಿದ್ದರು. ಪಕ್ಷದ ಇನ್ನೊಂದು ಬಣಕ್ಕೆ ಸೇರುವಂತೆ ನನ್ನ ತಂದೆಯ ಮೇಲೆ ಒತ್ತಡ ಹೇರುತ್ತಿದ್ದರು.” ಎಂದಿದ್ದಾರೆ.

Advertisement

ಸದ್ಯ ಪೊಲೀಸರು ಮೃತರ ಕುಟುಂಬದ ಆರೋಪವನ್ನು ಆಲಿಸಿ ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next