Advertisement

ನಡುರಾತ್ರಿಯಲ್ಲಿ ಒಂದೇ ಕುಟುಂಬದ ತ್ರಿವಳಿ ಹತ್ಯೆ: ದೊಡ್ಡವಾಡದಲ್ಲಿ ಬೆಚ್ಚಿ ಬೀಳಿಸಿದ ಮರ್ಡರ್

09:57 AM Jan 20, 2020 | keerthan |

ಬೆಳಗಾವಿ/ಬೈಲಹೊಂಗಲ: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

Advertisement

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಅಂದಾನ ಶೆಟ್ಟಿ, ಪತ್ನಿ ಶಾಂತವ್ವಾ ಹಾಗೂ ಪುತ್ರ ವಿನೋದ್ ಅಂದಾನ ಶೆಟ್ಟಿ ಕೊಲೆಯಾದವರು.

ತಂದೆ, ತಾಯಿ, ಮಗ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮುಂಜಾನೆ ನೆರೆಮನೆಯವರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಂದೇ ಕುಟುಂಬದ ಮೂವರ ಹತ್ಯೆಗೆ ಹಳೆ ವೈಷಮ್ಯ ಕಾರಣವಿರಬಹುದು ಎಂಬುದು ಶಂಕೆ ವ್ಯಕ್ತವಾಗಿದ್ದು, ಹಂತಕರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಾರು ಕೊಲೆ‌ಮಾಡಿದ್ದಾರೆ ಎಂಬುದು ಇನ್ನೂ ಗೊತ್ತಾಗಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ದೊಡ್ಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next