Advertisement

ಸಮಾನತೆಯ ಹೊಸ ಯುಗಾರಂಭ; ಸುಪ್ರೀಂ ತೀರ್ಪಿಗೆ ಅಮಿತ್ ಶಾ

01:53 PM Aug 22, 2017 | Sharanya Alva |

ನವದೆಹಲಿ: ದೇಶದಲ್ಲಿ ಸಮಾನತೆಯ ಹೊಸ ಯುಗ ಆರಂಭವಾಗಿದೆ ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ತ್ರಿವಳಿ ತಲಾಖ್ ರದ್ದು ಮಾಡಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ನೀಡಿದ ಪ್ರತಿಕ್ರಿಯೆ.

Advertisement

ಸುಪ್ರೀಂಕೋರ್ಟ್ ಪಂಚ ಸದಸ್ಯ ಪೀಠ, ತಲಾಖ್ ಅಸಾಂವಿಧಾನಿಕ ಎಂದು ಹೇಳಿ ರದ್ದು ಮಾಡಿ ಬಹುಮತದ ತೀರ್ಪು ನೀಡಿದೆ. ತ್ರಿವಳಿ ತಲಾಖ್ ಕುರಿತ ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದರು.

ಜಗತ್ತಿನ ಬಹುತೇಕ ದೇಶಗಳಲ್ಲಿ ತ್ರಿವಳಿ ತಲಾಖ್ ಅಸ್ತಿತ್ವದಲ್ಲಿ ಇಲ್ಲ, ಇದು ಯಾರ ವಿರುದ್ಧದ ಅಥವಾ ಪರವಾದ ತೀರ್ಪು ಎಂದು ವಿಂಗಡಿಸಲು ಸಾಧ್ಯವಿಲ್ಲ. ಇದೊಂದು ಮುಸ್ಲಿಮ್ ಮಹಿಳೆಯರಿಗೆ ಸಿಕ್ಕ ಸ್ವಾತಂತ್ರ್ಯ ಎಂದು ಶಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next