Advertisement

ತ್ರಿಪುರ: ರಥಯಾತ್ರೆ ವೇಳೆ ವಿದ್ಯುತ್ ತಂತಿ ಬಿದ್ದು 6 ಮಂದಿ ಮೃತ್ಯು, ಹಲವರಿಗೆ ಗಾಯ

10:02 PM Jun 28, 2023 | Team Udayavani |

ಉನಕೋಟಿ : ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ(ಜೂನ್ 28) ಕಬ್ಬಿಣದಿಂದ ಮಾಡಿದ ರಥದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಕನಿಷ್ಠ 6 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ.

Advertisement

ಉನಕೋಟಿಯ ಚೌಮುಹಾನಿ ಪ್ರದೇಶದಲ್ಲಿ ಮೆರವಣಿಗೆ ಹೊರಡುತ್ತಿದ್ದಾಗ ರಥದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅದರ ಮೇಲೆ ಕನಿಷ್ಠ 20 ಜನರು ಏರಿದ್ದರು. ವಿದ್ಯುತ್ ಸ್ಪರ್ಶದಿಂದ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ರಥ ಹೊತ್ತಿ ಉರಿದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ. ಸಾವುನೋವುಗಳು ಹೆಚ್ಚಾಗುವ ನಿರೀಕ್ಷೆಯಿದೆ.ಗಾಯಾಳುಗಳನ್ನು ಕುಮಾರ್‌ಘಾಟ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಅಲ್ಲಿಂದ ಅವರನ್ನು ಉನಕೋಟಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next