Advertisement

ಸಹಕಾರ ಬ್ಯಾಂಕ್‌ನಲ್ಲಿ 300 ಕೋಟಿ ರೂ. ಅವ್ಯವಹಾರ ಪ್ರಕರಣ : ನಾಲ್ವರ ಬಂಧನ

06:12 PM Sep 13, 2021 | Team Udayavani |

ತ್ರಿಶ್ಶೂರ್‌: ಕೇರಳದ ತ್ರಿಶ್ಶೂರ್‌ ಜಿಲ್ಲೆಯ ಕರುವನ್ನೂರ್‌ ಸೇವಾ ಸಹಕಾರ ಬ್ಯಾಂಕ್‌ನಲ್ಲಿ 300 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರ್ಯಾಂಚ್‌ನ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Advertisement

ಅವರೆಲ್ಲರೂ ಬ್ಯಾಂಕ್‌ನ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ, ನಿರ್ದೇಶಕರು ಮತ್ತು ಸದಸ್ಯರಾಗಿದ್ದಾರೆ. ದೇಶವ್ಯಾಪಿ ಸುದ್ದಿಯಾಗಿದ್ದ ಸಾಲ ಹಗರಣದಲ್ಲಿ ಕಳೆದ ತಿಂಗಳು ಬ್ಯಾಂಕ್‌ನ ಮಾಜಿ ಕಾರ್ಯದರ್ಶಿ ಟಿ.ಆರ್‌.ಸುನೀಲ್‌ ಕುಮಾರ್‌ ಎಂಬಾತನನ್ನು ಬಂಧಿಸಲಾಗಿತ್ತು.

ಬೇರೆ ಬೇರೆ ವ್ಯಕ್ತಿಗಳ ಹೆಸರಲ್ಲಿ ಸಾಲ ತೆಗೆದು ಸಹಕಾರ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆಸಲಾಗಿತ್ತು. ಜುಲೈನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ :ಈ ತಿಂಗಳ ಅಂತ್ಯಕ್ಕೆ ಭಾರತೀಯ ಖಾತೆದಾರರ ವಿವರ ಲಭ್ಯ : ಸ್ವಿಸ್ ಬ್ಯಾಂಕ್

Advertisement

Udayavani is now on Telegram. Click here to join our channel and stay updated with the latest news.

Next