Advertisement

ಗೋವಾ: ತೃಣಮೂಲ ಕಾಂಗ್ರೆಸ್ ಪ್ರವೇಶದಿಂದ ಬಿಜೆಪಿಗೆ ಭೀತಿ: ಟ್ರೋಜನ್ ಡಿಮೆಲೊ

07:15 PM Dec 08, 2021 | Team Udayavani |

ಪಣಜಿ: ತೃಣಮೂಲ ಕಾಂಗ್ರೆಸ್ ಗೋವಾ ರಾಜ್ಯಕ್ಕೆ ಪ್ರವೇಶಿಸಿದಾಗಿನಿಂದ ಬಿಜೆಪಿ ಭಯಭೀತಗೊಂಡಿದೆ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ಸುಳ್ಳು ಪ್ರಚಾರ ಆರಂಭಿಸಿದೆ ಎಂದು ಟಿಎಂಸಿ ನಾಯಕ ಟ್ರೋಜನ್ ಡಿಮೆಲೊ ಆರೋಪಿಸಿದ್ದಾರೆ.

Advertisement

ಪಣಜಿಯ ಟಿಎಂಸಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ಸುಳ್ಳು ಮಾಹಿತಿಯನ್ನು ಹರಡುವ ಇತಿಹಾಸವನ್ನು ಹೊಂದಿರುವುದರಿಂದ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧದ ಏಕೈಕ ಪಕ್ಷವಾಗಿದೆ. ಬಿಜೆಪಿಯು ಇದುವರೆಗೂ ಸುಳ್ಳು ಆಶ್ವಾಸನೆ ನೀಡಿ ಗೋವಾ ಜನತೆಗೆ ದ್ರೋಹ ಬಗೆದಿದೆ. ಕೇವಲ ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಆಶ್ವಾಸನೆಗಳನ್ನು ನೀಡಲಾಗುತ್ತಿದೆ. ಪ್ರಸಕ್ತ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಯನ್ನು ದೂರವಿಡಲಿದ್ದಾರೆ ಎಂದು ಟ್ರೋಜನ್ ಡಿಮೆಲೊ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಫ್ರಾನ್ಸಿಸ್ಕೊ ಫರ್ನಾಂಡಿಸ್, ಕಾಶೀನಾಥ ಮಯೇಕರ್, ಮತ್ತಿತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next