Advertisement

ವಿನಯ್ ಕುಲಕರ್ಣಿಗೆ ಸಂಕಷ್ಟ: ಧಾರವಾಡ ಗ್ರಾಮೀಣ ಕ್ಷೇತ್ರ ಪ್ರವೇಶಕ್ಕೆ ಸಿಗದ ಅನುಮತಿ

02:27 PM Apr 18, 2023 | Team Udayavani |

ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ ನಿರಾಕರಿಸಿದೆ.

Advertisement

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸದಂತೆ ಕೋರ್ಟ್ ನಿರ್ಬಂಧ ಹೇರಿತ್ತು. ಆದರೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರುವ ಕಾರಣ ಕುಲಕರ್ಣಿ ಅವರು ಮೇಲ್ಮನವಿ ಸಲ್ಲಿಸಿದರು.

ಇದನ್ನೂ ಓದಿ:Karnataka Polls ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ಆರೋಪ

ಆದರೆ ಜನಪ್ರತಿನಿಧಿಗಳ ನ್ಯಾಯಾಲಯವು ಅರ್ಜಿ ವಜಾ ಮಾಡಿದ್ದು, ಪ್ರವೇಶ ನಿರಾಕರಿಸಿದೆ. ಧಾರವಾಡದಲ್ಲಿ ಯೋಗೀಶ್ ಹತ್ಯೆಯ 90 ಸಾಕ್ಷಿಗಳಿದ್ದಾರೆ. ಪ್ರವೇಶಕ್ಕೆ ಅನುಮತಿ ನೀಡಿದರೆ ಕೇಸ್ ಗೆ ಸಮಸ್ಯೆಯಾಗಬಹುದು.‌ ಸೂಚಕರ ಮೂಲಕವೇ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದಿದ್ದಾರೆ.

ಸಿಬಿಐ ಪರ ಎಸ್ ಪಿಪಿ ಗಂಗಾಧರ ಶೆಟ್ಟಿ ವಾದಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next