Advertisement
ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಹಲವು ಬಾರಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ, ಗಣಿಗಾರಿಕೆ ತಡೆಗಟ್ಟಲು ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ.
Related Articles
Advertisement
ಅರಣ್ಯ ಪ್ರದೇಶ ಒತ್ತುವರಿ: ಗ್ರಾಮಕ್ಕೆ ಹೊಂದಿಕೊಂಡಂತೆ ಅರಣ್ಯ ಪ್ರದೇಶವಿದೆ. ಅದನ್ನೂ ಗಣಿಮಾಲೀಕರು ಒತ್ತುವರಿ ಮಾಡಿ ಕೊಂಡು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಪ್ರಾಕೃತಿಕ ಸಂಪತ್ತು ನಾಶವಾಗುತ್ತಿದೆ.ಗ್ರಾಮ, ಕೃಷಿ ಭೂಮಿ ಧೂಳುಮಯ: ಅಕ್ರಮ ಗಣಿಗಾರಿಕೆಯಿಂದ ಗ್ರಾಮ ಹಾಗೂ ಸುತ್ತಮುತ್ತಲಿನ ಕೃಷಿ ಪ್ರದೇಶ ಧೂಳಿನಿಂದ ಕೂಡಿದೆ. ಪ್ರತಿದಿನ ಗ್ರಾಮದಲ್ಲಿ ಸಂಚರಿಸುವ ಲಾರಿಗಳ ಸಂಚಾರದಿಂದ ಮೇಲೇಳುವ ಧೂಳು ಗ್ರಾಮವನ್ನುಆವರಿಸುತ್ತದೆ. ಇದರಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವೃದ್ಧರು, ರೋಗಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಜೋರಾಗಿ ಸಾಗುವ ಲಾರಿಗಳಿಂದ ಬರುವ ಧೂಳು ಸಾರ್ವಜನಿಕರ ಕಣ್ಣಿಗೆ ರಾಚುತ್ತದೆ. ಇದರಿಂದ ಈಗಾಗಲೇ ಸಾಕಷ್ಟು ಮಂದಿ ಅನಾರೋಗ್ಯಕ್ಕೀಡಾಗಿದ್ದಾರೆ. ಇದರ ಜೊತೆಗೆ ಅಕ್ಕಪಕ್ಕದ ಜಮೀನುಗಳ ಬೆಳೆಗಳ ಮೇಲೆ ಧೂಳು ಆವರಿಸುವುದರಿಂದ ಬೆಳೆಗಳು ನಾಶವಾಗುತ್ತಿವೆ. ಭೂಮಿಯ ಫಲವತ್ತತೆ ನಾಶವಾಗುತ್ತಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ಕ್ರಮ ಕೈಗೊಳ್ಳದ ಜಿಲ್ಲಾಡಳಿತ : ಜಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಹಲವು ಬಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂಯಾವುದೇಕ್ರಮ ಕೈಗೊಂಡಿಲ್ಲ. ಗಣಿಗಾರಿಕೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸಲಾಗಿದೆ. ಆದರೆ,ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ ಎಂದು ಗ್ರಾಮದ ಮಾದೇವು ಹೇಳುತ್ತಾರೆ.
ಸುಮಾರು 30ರಿಂದ 40 ಟನ್ ಕಲ್ಲು ತುಂಬಿದ ಲಾರಿಗಳು ಸಂಚರಿಸುವುದರಿಂದ ರಸ್ತೆಗಳು ಹಾಳಾಗಿವೆ. ರಾತ್ರಿ ವೇಳೆಯಲ್ಲಿ ಲಾರಿಗಳು ಸಂಚರಿಸುವುದರಿಂದ ಗ್ರಾಮಸ್ಥರು ನೆಮ್ಮದಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಎದೆಯ ಮೇಲೆಯೇ ಲಾರಿಗಳು ಸಂಚರಿಸುವ ಅನುಭವ ವಾಗುತ್ತದೆ. ಮಹಿಳೆಯರು, ಮಕ್ಕಳು ಭಯ ಪಡುವಂತಾಗಿದೆ. ಆದ್ದರಿಂದಕೂಡಲೇ ಜಿಲ್ಲಾಧಿಕಾರಿ ಕ್ರಮಕೈಗೊಂಡು ಗಣಿಗಾರಿಕೆ ನಿಲ್ಲಿಸಬೇಕು. –ಮಹದೇವು, ಗ್ರಾಮದ ಮುಖಂಡ
– ಎಚ್.ಶಿವರಾಜು