Advertisement

ನಗರದಲ್ಲಿ ಅರೆಬರೆ ಕಾಮಗಾರಿಯಿಂದ ತೊಂದರೆ

01:44 AM Sep 01, 2019 | Team Udayavani |

ನಗರದ ಬಹುತೇಕ ಕಡೆಗಳಲ್ಲಿ ಅರೆಬರೆ ಕಾಮಗಾರಿಗಳನ್ನು ಮಾಡಿ ಹಾಗೆಯೇ ಬಿಡಲಾಗಿದೆ.

Advertisement

ಮಳೆಗಾಲದವರೆಗೆ ಮೀನಮೇಷ ಎಣಿಸುವ ಅಧಿಕಾರಿಗಳು ಮಳೆಗಾಲ ಆರಂಭವಾಗುತ್ತಿದ್ದಂತೆ ಚರಂಡಿ, ರಸ್ತೆ ಅಗಲ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಆರಂಭಿಸುತ್ತಾರೆ. ಇದರಿಂದಾಗಿ ಮಳೆ ನೀರು ಹೋಗುವ ಸಮಸ್ಯೆ, ಟ್ರಾಫಿಕ್‌ ಬ್ಲಾಕ್‌ ನಡೆದುಕೊಂಡು ಹೋಗುವ ಪಾದಚಾರಿಗಳಿಗೆ ಎಲ್ಲಿ ನಡೆಯುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಲಾಲ್ಬಾಗ್‌, ಬಿಜೈ, ಕದ್ರಿ ಕಂಬಳ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಲವೆಡೆ ಬಿಟ್ಟು ಬಿಟ್ಟು ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ನಿತ್ಯ ಆ ಭಾಗದಲ್ಲಿ ಸಂಚರಿಸುವ ಜನರು ಕಷ್ಟ ಅನುಭವಿಸುವಂತಾಗಿದೆ. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹುಡುಕುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

– ಪ್ರಜ್ಞಾ ಶೆಟ್ಟಿ

Advertisement

Udayavani is now on Telegram. Click here to join our channel and stay updated with the latest news.

Next