Advertisement

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ರಸ್ತೆಯಲ್ಲಿ ಬಿದ್ದವರ ಮೇಲೆ ಹರಿದ ಲಾರಿ: ಇಬ್ಬರ ಸಾವು

01:59 PM Dec 12, 2019 | Team Udayavani |

ದಾವಣಗೆರೆ: ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ  ಹಿಂದಿನಿಂದ ಬಂದ ಲಾರಿ ಗಾಯಳುಗಳ ಮೇಲೆ ಹರಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ‌ ಸಂಭವಿಸಿದೆ.

Advertisement

ಮಿಯಾಪುರ ಗ್ರಾಮದ ಅಂಜಿನಪ್ಪ(29) ಮತ್ತು ಮನೋಜ್ (19) ಮೃತ ದುರ್ದೈವಿಗಳು. ಈ ಯುವಕರು  ದಾವಣಗೆರೆಯಿಂದ ತ್ಯಾವಣಿಗೆ ಕಡೆಗೆ ಬೈಕಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ.

ಈ ವೇಳೆ ಎದುರಿನ ಬೈಕ್‌ ನಲ್ಲಿದ್ದ  ವ್ಯಕ್ತಿಗಳು ರಸ್ತೆಯ ಬದಿಗೆ ಬಿದ್ದರೆ, ಅಂಜಿನಪ್ಪ ಮತ್ತು ಮನೋಜ್  ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಬಂದ ಲಾರಿ, ಗಾಯಳುಗಳ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೆ ಒಬ್ಬ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಕೆಲ‌ಕಾಲ ಗಾಯಳುಗಳು ರಸ್ತೆಯಲ್ಲೇ ನರಳಿದ್ದು, ಆಸ್ಪತ್ರೆಗೆ ಕರೆದೊಯ್ಯುಲು ವಾಹನ ಸಿಗದೆ ಪರದಾಟ ಅನುಭವಿಸಿದ್ದಾರೆ. ಇನ್ನಿಬ್ಬರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು‌ ಮಾಡಲಾಗಿದ್ದು, ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next