Advertisement

ತನಿಖೆ ಬಳಿಕ ಸತ್ಯಾಂಶ ಬಹಿರಂಗ: ಡಾ.ಹರ್ಷ

11:18 PM Jan 11, 2020 | Team Udayavani |

ಮಂಗಳೂರು: ಡಿ.19ರಂದು ನಡೆದ ಪ್ರತಿಭಟನೆ ಮತ್ತು ಪೊಲೀಸ್‌ ಗೋಲಿಬಾರ್‌ ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸ್‌ ಆಯುಕ್ತರು, ಬಿಡುಗಡೆ ಮಾಡಿದ ವಿಡಿಯೋ ದೃಶ್ಯಾವಳಿಗೆ ಪ್ರತಿಯಾಗಿ ಶುಕ್ರವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಿಡಿ ಒಂದನ್ನು ಬಿಡುಗಡೆ ಮಾಡಿದ್ದು, ಶನಿವಾರ ಅದಕ್ಕೆ ಪ್ರತಿಕ್ರಿಯಿಸಿ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌. ಆಡಿಯೋ ಸಂದೇಶದ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

Advertisement

ಸೆಕ್ಷನ್‌ 144ರ ಅನ್ವಯ ನಿಷೇ ಧಾಜ್ಞೆ ಜಾರಿಯಲ್ಲಿದ್ದರೂ ಕೆಲವು ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿ, ಕಾನೂನಿನ ಸ್ಪಷ್ಟ ಉಲ್ಲಂಘನೆ ಮಾಡಿದ್ದಲ್ಲದೆ, ಗಲಭೆ ಸೃಷ್ಟಿಸಿ ಹಿಂಸಾಚಾರದಲ್ಲಿ ತೊಡಗಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್‌ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next