Advertisement

ಮಂಗಳವಾರದ ರಾಶಿ ಭವಿಷ್ಯ : ಇಂದು ಈ ರಾಶಿಯವರಿಗೆ ಧನಲಾಭ…

07:21 AM Sep 27, 2022 | Team Udayavani |

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ. ಹಿರಿಯರಿಂದ ಸಂತೋಷ ವೃದ್ಧಿ.

Advertisement

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸದಿಂದ ಹೆಚ್ಚಿನ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರು ಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ, ಸಾಮಾಜಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಆದಾಯ.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

Advertisement

ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮನ ಸಂಭವ.

ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತತೆ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ವೃಶ್ಚಿಕ: ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿ ಇದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಹದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯದಲ್ಲಿ ಗಮನವಿರಲಿ. ಧಾರ್ಮಿಕ ಕಾರ್ಯದಲ್ಲಿ ಶೃದ್ಧೆ.

ಧನು: ಆರೋಗ್ಯದಲ್ಲಿ ವೃದ್ಧಿ. ಸಹೋದರಾದಿ ಸಹಾಯದಿಂದ ಉತ್ತಮ ಧನಾರ್ಜನೆ. ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ; ದೇವತಾ ಕಾರ್ಯ ವಿಳಂಬ.

ಮಕರ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.

ಕುಂಭ: ಅನಿರೀಕ್ಷಿತ ಧನಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು, ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯೋಗದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯವಹಾರಸ್ಥರಿಗೆ ಉತ್ತಮ ದಿನ.

ಮೀನ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ ಕಾರ್ಯಸಾಧನೆ. ಧಾರ್ಮಿಕ ಚಿಂತನೆಯಲ್ಲಿ ಆಸಕ್ತಿ.

Advertisement

Udayavani is now on Telegram. Click here to join our channel and stay updated with the latest news.

Next