Advertisement

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:59 AM Aug 31, 2021 | Team Udayavani |

ಮೇಷ: ಧಾರ್ಮಿಕ ಚಟುವಟಿಕಗಳ ೆ ಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ.ಬಂಧುಮಿತ್ರರಲ್ಲಿ ಬೇಸರಮಾಡದಿರಿ.

Advertisement

ವೃಷಭ: ಗೃಹ, ವಾಹನಾದಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ದೂರದವ್ಯವಹಾರಗಳಲ್ಲಿ ಪ್ರಗತಿ.ಮಾತಿನಲ್ಲಿದಾಕ್ಷಿಣ್ಯ ತೋರದೆ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕಿತ Ò ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಜವಾಬ್ದಾರಿ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಗೃಹ ಸಂಬಂಧಿಖರ್ಚು.ಮಕ್ಕಳಿಂದ ಸುಖ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಪಾಲುದಾರರಿಂದ ಆಸ್ತಿ ವಿಚಾರದಲ್ಲಿ ಪ್ರಗತಿ.

Advertisement

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ.

ತುಲಾ: ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಸುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಆರೋಗ್ಯ ಉತ್ತಮ. ಮಾನಸಿಕ ನೆಮ್ಮದಿ. ಅವಿವಾಹಿತರಿಗೆ ವಿವಾಹಯೋಗಕೂಡಿ ಬರುವುದು.

ವೃಶ್ಚಿಕ: ಅನಿರೀಕ್ಷಿತ ಧನಸಂಪತ್ತಿನ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸದಿಂದಕಾರ್ಯ ಸಾಧಿಸಿ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಧನು: ಕೆಲಸಕಾರ್ಯಗಳಲ್ಲಿ ಜವಾಬ್ದಾರಿಯಿಂದಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ಸ್ಥಿರ. ಪ್ರಗತಿಪರ ಬದಲಾವಣೆ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆ ಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಟೂರ ವರ್ತನೆ ಸಲ್ಲದು.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮುಗ್ಧತೆ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರದಲ್ಲಿ ಎಲ್ಲ ಸಹಕಾರದಿಂದ ಪ್ರಗತಿ. ದೂದ ಮಿತ್ರರ ಭೇಟಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಗೌರವ ಆದರದ ಮನ್ನಣೆ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ.

Advertisement

Udayavani is now on Telegram. Click here to join our channel and stay updated with the latest news.

Next