Advertisement

ಮಂಗಳವಾರದ ರಾಶಿ ಫಲ: ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ, ಅವಿವಾಹಿತರಿಗೆ ವಿವಾಹ ಯೋಗ

07:35 AM Nov 15, 2022 | Team Udayavani |

ಮೇಷ: ಆರೋಗ್ಯದಲ್ಲಿ ತೃಪ್ತಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರಲ್ಲಿ ಪ್ರೀತಿ ವಿಶ್ವಾಸ ವೃದ್ಧಿ. ಅನಿರೀಕ್ಷಿತ ಧನಲಾಭ.

Advertisement

ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೈಹಿಕ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಗುರು ಹಿರಿಯರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ಆಳವಾದ ಜ್ಞಾನ ಸಂಪಾದನೆಗೆ ಅವಕಾಶ.

ಮಿಥುನ: ನೂತನ ಮಿತ್ರರ ಸಮಾಗಮ. ನಷ್ಟ ದ್ರವ್ಯ ಲಭಿಸುವ ಕಾಲ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂ ದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ವೃದ್ಧಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮವಹಿಸಿ ನಿರೀಕ್ಷಿತ ಗುರಿಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

Advertisement

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ#ನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ತುಲಾ: ದೇವತಾ ಕಾರ್ಯದಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು ಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದ್ದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next