Advertisement

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

08:05 AM Sep 07, 2021 | Team Udayavani |

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರ ದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.

Advertisement

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ.

ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ ಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ.

Advertisement

ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ.

ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥ ರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ಗುರುಹಿರಿಯರ ಆರೋಗ್ಯ ಗಮನಿಸಿ.

Advertisement

Udayavani is now on Telegram. Click here to join our channel and stay updated with the latest news.

Next