Advertisement

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ತುಳಸಿ ಮುನಿರಾಜು

12:22 PM Mar 04, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ತುಳಸಿ ಮುನಿರಾಜು ಅವರು ಇಂದು ನಾಮಪತ್ರ ಸಲ್ಲಿಸಿದರು.

Advertisement

ವಿಧಾನ ಸೌಧದ ಪಶ್ಚಿಮ ದ್ವಾರಕ್ಕೆ ನಮಸ್ಕರಿಸಿ, ವಿಧಾನ ಸೌಧಕ್ಕೆ ಭೇಟಿ ಕೊಟ್ಟ ತುಳಸಿ ಮುನಿರಾಜು ಗೌಡ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾದ್ಯಕ್ಷ್ಯ ನಳೀನ್ ಕುಮಾರ್ ಕಟೀಲ್, ಸಚಿವ ಅಶೋಕ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ:ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಈ ವೇಳೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಮುನಿರಾಜು‌ ಗೌಡ ಪಕ್ಷದ ತಳಮಟ್ಟದ ಕಾರ್ಯಕರ್ತ. ಯುವ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಲೋಕಸಭಾ, ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದವರು ಹಾಲಿ ರಾಜ್ಯ ಕಾರ್ಯದರ್ಶಿಗಳಾಗಿದ್ದಾರೆ. ಅವರನ್ನು ಪಕ್ಷ ಈಗ ಗುರುತಿಸಿ ಸರ್ವಸಮ್ಮತದ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದರು.

ಇದನ್ನೂ ಓದಿ: ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಕೈರನ್ ಪೊಲಾರ್ಡ್!  ಆರು ಬಾಲ್ ಗೆ ಆರು ಸಿಕ್ಸ್ !

Advertisement
Advertisement

Udayavani is now on Telegram. Click here to join our channel and stay updated with the latest news.

Next