Advertisement

ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ ನಿಧನ

11:55 AM Apr 18, 2021 | Team Udayavani |

ಮಂಗಳೂರು: ತುಳು ಚಿತ್ರರಂಗದ ಪ್ರತಿಭಾನ್ವಿತ ಯುವ ನಿರ್ದೇಶಕ ರಘು ಶೆಟ್ಟಿ (39 ವ) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.

Advertisement

ರಘು ಶೆಟ್ಟಿ ಅವರು “ಅರ್ಜುನ್ ವೆಡ್ಸ್ ಅಮೃತ” ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದರು. ಖಾಸಗಿ ವಾಹಿನಿಯಲ್ಲಿ ಉದ್ಯೋಗದಲ್ಲಿದ್ದ ಅವರು ಬಳಿಕ ತುಳು ಸಿನಿಮಾ ರಂಗದಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ನಂತರ ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮವನ್ನೂ ನಡೆಸಿದ್ದರು. ಈ ಮಧ್ಯೆ ಕನ್ನಡ ಚಿತ್ರವೊಂದರ ನಿರ್ದೇಶನದ ತಯಾರಿ ನಡೆಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ರಘು ಶೆಟ್ಟಿ ಶನಿವಾರ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕೋಸ್ಟಲ್ ವುಡ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next