Advertisement
ತುಳು ಭಾಷೆಯನ್ನು ಮನೆಯಲ್ಲಿ ಚೆನ್ನಾಗಿ ಮಾತನಾಡುವ ಮೂಲಕ ಅದರ ಉಳಿವಿಗಾಗಿ ಪ್ರಯತ್ನಿಸಬೇಕು. ನಮಗೆ ಎಲ್ಲಾ ಭಾಷೆಗಳು ಬೇಕು. ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಮರೆಯಬಾರದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಜಗದೀಶ ಬಾಳ ಮಾತನಾಡಿ, ತುಳು ಭಾಷೆಯನ್ನು ಶೈಕ್ಷಣಿಕವಾಗಿ ಮಾತನಾಡುವ ವಾತಾವರಣ ಸೃಷ್ಟಿಯಾಗಬೇಕು. ಪರವೂರಿನಲ್ಲಿ ತುಳು ಮಾತನಾಡವವರು ಸಿಗುವಾಗ ತುಳುವಿನ ಮಹತ್ವ ನಮಗೆ ಅರಿವಾಗುತ್ತದೆ ಎಂದರು. ಅಂತರ್ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ತುಳು ಕತೆ ಮತ್ತು ಕವಿತೆ ಬರೆಯುವ ಕಾರ್ಯಾಗಾರವನ್ನು ಪತ್ರಕರ್ತ ಪ್ರವೀಣ್ ಅಮ್ಮೆಂಬಳ ಮತ್ತು ಎಸ್.ವಿ.ಎಸ್. ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ‘ತುಳು ಕಥೆ-ಕಬಿತೆ ಬರವು-ಸರವು: ಒಂಜಿ ದಿನೊತ ಕಜ್ಜಕೊಟ್ಯ’ದ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರ ನಡೆಸಿಕೊಟ್ಟರು. ತುಳು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ, ಸದಸ್ಯ ಬೆನೆಟ್ ಅಮನ್ನ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಜ್ಯೋತಿಪ್ರಿಯ ಸ್ವಾಗತಿಸಿದರು. ಡಾ| ವಿಶ್ವನಾಥ ಬದಿಕಾನ ವಂದಿಸಿದರು. ನಿಶ್ಮಿತ ನಿರೂಪಿಸಿದರು.