Advertisement

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

10:43 PM Jul 08, 2024 | Team Udayavani |

ಮಂಗಳೂರು: ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ ಅವರು ದಂಪತಿ ಸಮೇತರಾಗಿ ಮಂಗಳೂರಿಗೆ ಆಗಮಿಸಿದ್ದಾರೆ.

Advertisement

ಸೂರ್ಯಕುಮಾರ್‌ ಯಾದವ್‌ ಮತ್ತು ಅವರ ಪತ್ನಿ, ಕರಾವಳಿ ಮೂಲದ ದೀವಿಶಾ ಶೆಟ್ಟಿ ಅವರು ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೇರೆಡೆ ತೆರಳಿದರು. ಈ ಜೋಡಿ ಜು. 7ರಂದು ಮದುವೆ ವಾರ್ಷಿಕೋತ್ಸವ ಆಚರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ತುಳುನಾಡಿನ ನಂಟು
ಸೂರ್ಯಕುಮಾರ್‌ ಯಾದವ್‌ ಅವರ ಪತ್ನಿ ದೀವಿಶಾ ಶೆಟ್ಟಿ ಅವರು ಕರಾವಳಿ ಮೂಲದವರಾಗಿದ್ದು, ಚೆನ್ನಾಗಿ ತುಳು ಮಾತಾಡುತ್ತಾರೆ. ಕಳೆದ ವರ್ಷ ಶ್ರೀಲಂಕಾ ವಿರುದ್ಧ ಸೂರ್ಯಕುಮಾರ್‌ ಅವರ ಸ್ಫೋಟಕ ಆಟಕ್ಕೆ ಕನ್ನಡಿಗ ಕೆ.ಎಲ್‌. ರಾಹುಲ್‌ ಅವರು “ಬಾರಿ ಎಡ್ಡೆ ಗೊಬ್ಬಿಯ ಸೂರ್ಯ’ (ತುಂಬಾ ಚೆನ್ನಾಗಿ ಆಟವಾಡಿದೆ ಸೂರ್ಯ) ಎಂದು ಸಾಮಾಜಿಕ ಜಾಲತಾಣದ ಮೂಲಕ ತುಳು ಭಾಷೆಯಲ್ಲಿ ಪ್ರಶಂಸಿಸಿದ್ದರು. ಈ ಪೋಸ್ಟ್‌ಗೆ ಸೂರ್ಯಕುಮಾರ್‌ ಅವರ ಪತ್ನಿ ದೀವಿಶಾ, “ಚೂರ್‌ ತುಳು ಕಲ್ಪಾವೊಡು ಆರೆಗ್‌ ನನ’ (ಅವರಿಗೆ ಇನ್ನು ಸ್ವಲ್ಪ ತುಳು ಕಲಿಸಬೇಕು) ಎಂದು ಪ್ರತಿಕ್ರಿಯಿಸಿದ್ದರು. ಈ ಹಿಂದೆ ಸೂರ್ಯ ಮಗಳು ತುಳುವಿನಲ್ಲಿ ಮಾತನಾಡುವ ವೀಡಿಯೋ ಕೂಡ ವೈರಲ್‌ ಆಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next