Advertisement

Pilikula “ತುಳುನಾಡೋತ್ಸವ’ ಆಯೋಜನೆಗೆ ಸಚಿವರಿಗೆ ಮನವಿ

12:14 AM Sep 04, 2024 | Team Udayavani |

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ನ. 14ರಿಂದ 18ರ ವರೆಗೆ “ಪಿಲಿಕುಳ್ಳೋತ್ಸವ’ ಅಥವಾ “ತುಳುನಾಡೋತ್ಸವ’ ಆಯೋಜನೆಗೆ ಸಚಿವ ಎನ್‌.ಎಸ್‌.ಭೋಸರಾಜು ಅವರಿಗೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಮನವಿ ಸಲ್ಲಿಸಿದ್ದಾರೆ.

Advertisement

ಯುವ ಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿ ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿಪಡಿಸುವಂತೆ ವಿನಂತಿಸಿದ್ದಾರೆ.

ಪ್ರಾಣಿಗಳ ನಿರ್ವಹಣೆಗೆ ಕ್ರಮ
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಾಕಿ ಇರುವ ಸದಸ್ಯರನ್ನು ನೇಮಕ ಮಾಡಬೇಕು. ನಿಸರ್ಗಧಾಮದ ವ್ಯಾಪ್ತಿಯಲ್ಲಿ ಅನೇಕ ಕಟ್ಟಡಗಳು ನಿರ್ಮಾಣಗೊಂಡು ಕೆಲವು ಪೂರ್ಣಗೊಳ್ಳದೆ ಪಾಳುಬಿದ್ದಿದ್ದು ಅವುಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು. ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎನ್ನಲಾಗುತ್ತಿದ್ದು ಈ ಬಗ್ಗೆ ನಿರ್ವಹಣೆ ಕೈಗೊಳ್ಳಬೇಕು. ಉದ್ಯಾನವನ, ಶೌಚಾಲಯದ ನಿರ್ವಹಣೆಗೆ ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next