Advertisement

Tumakuru; ಕೆರೆಗೆ ಧುಮುಕಿದ ಕಾರು : ಒಂದೇ ಕುಟುಂಬದ ಮೂವರು ಮೃತ್ಯು

07:02 PM Oct 29, 2023 | Team Udayavani |

ತುಮಕೂರು:ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆ ಕಾರು ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದ್ದು, ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅವಘಡ ನಡೆದ ವೇಳೆ ಪ್ರವೀಣ್ ಅವರ ಪತ್ನಿ ಯಮುನಾ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮೃತ ದೊಡ್ಡಣ್ಣ, ಸಣ್ಣಮ್ಮ ಯಮುನಾ ಅವರ ತಂದೆ ತಾಯಿ ಎಂದು ತಿಳಿದು ಬಂದಿದೆ.

ಪ್ರವೀಣ್‌ ಕಾರಿನ ಬಾಗಿಲು ತೆಗೆದು ಹೊರ ಬಂದು ಈಜಿ ಪಾರಾಗಿ ಬೊಬ್ಬಿಟ್ಟು ಅಕ್ಕಪಕ್ಕದವರನ್ನು ಕರೆದಿದ್ದಾರೆ. ಸ್ಥಳೀಯರು ಬಂದು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿರಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next