Advertisement

Thumbe: ಖಾಸಗಿ ಬಸ್ಸುಗಳ ಪೈಪೋಟಿ

08:30 PM Jun 20, 2024 | Team Udayavani |

ಬಂಟ್ವಾಳ: ರಾ.ಹೆ.75ರ ತುಂಬೆ ತಿರುವಿನ ಬಳಿ ಖಾಸಗಿ ಬಸ್ಸುಗಳ ಪೈಪೋಟಿಯ ಹಿನ್ನೆಲೆಯಲ್ಲಿ ಒಂದು ಬಸ್ಸು ಮತ್ತೂಂದು ಬಸ್ಸಿಗೆ ಹಿಂದಿನಿಂದ ಢಿಕ್ಕಿಯಾದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

Advertisement

ಮಂಗಳೂರಿನಿಂದ ಪುತ್ತೂರಿಗೆ ಹೋಗುವ ಸೇಪ್‌ವೇ ಬಸ್ಸಿಗೆ ಹಿಂದಿನಿಂದ ಉಪ್ಪಿನಂಗಡಿ ಹೋಗುವ ಆರಫಾ ಬಸ್ಸು ಢಿಕ್ಕಿ ಹೊಡೆದಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್ಸುಗಳು ಸದಾ ಸ್ಪರ್ಧೆಯಲ್ಲೇ ಸಂಚಾರ ಮಾಡುತ್ತಿದ್ದು, ಇಂತಹ ಘಟನೆಗಳಿಗೆ ಚಾಲಕನ ನಿರ್ಲಕ್ಷéವೇ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.

ಈ ರೀತಿ ಸ್ಪರ್ಧೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೀವಹಾನಿಯ ಜತೆಗೆ ಕೈಕಾಲುಗಳಿಗೆ ಹಾನಿಯಾದರೆ ಯಾರು ಹೊಣೆ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next