Advertisement

Tumkur ಮಾಧುಸ್ವಾಮಿ ಮನೆಗೆ ಭೇಟಿ ಕೊಟ್ಟ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ

11:32 PM Apr 07, 2024 | Team Udayavani |

ತುಮಕೂರು: ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇ ಗೌಡರು ರವಿವಾರ ಬಿಜೆಪಿಯ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಇದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿ.ಸೋಮಣ್ಣರಿಗೆ ಬಿಜೆಪಿ ಟಿಕೆಟ್‌ ದೊರೆತ ಬೆನ್ನಲ್ಲೇ, ಅಸಮಾಧಾನಗೊಂಡಿರುವ ಜೆ.ಸಿ.ಮಾಧುಸ್ವಾಮಿ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದರು.

Advertisement

ಸ್ನೇಹಿತ ಅಂತ ಮನೆಗೆ ಸ್ವಾಗತಿಸಿದ್ದೇನೆ
ಮುದ್ದಹನುಮೇ ಗೌಡ ಅಭ್ಯರ್ಥಿಯಾಗಿ ನಮ್ಮ ಮನೆಗೆ ಬಂದಿದ್ದಾರೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಸ್ನೇಹಿತ ಮನೆಗೆ ಬಂದಾಗ ಸ್ವಾಗತಿಸಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅಭ್ಯರ್ಥಿ ಆದವರು ಬೆಂಬಲ ಕೇಳಿದ್ದಾರೆ.

ನಾವು ಬೇರೆ ಪಕ್ಷದಲ್ಲಿ ಇರುವವರು, ಬೆಂಬಲ ಕೊಡುವುದಕ್ಕೆ ಆಗುತ್ತಾ? ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಮಾಧುಸ್ವಾಮಿ “ಉದಯವಾಣಿ’ಗೆ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next