Advertisement

Tumkur ಜಿಲ್ಲೆಗೆ ಊರೂರು ಅಲೆಯುವ ಸೋಮಣ್ಣ ಬೇಕೆ?: ಪರಮೇಶ್ವರ್‌

12:34 AM Apr 14, 2024 | Team Udayavani |

ತುಮಕೂರು: ರಾಜಕೀಯ ಅಧಿಕಾರಕ್ಕಾಗಿ ಗೋವಿಂದ ರಾಜನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ. ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರರ ವಿರುದ್ಧ ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಾರೆ. ಅಧಿಕಾರಕ್ಕಾಗಿ ಈ ರೀತಿ ಊರೂರು ಅಲೆಯುವ ವ್ಯಕ್ತಿ ತುಮಕೂರು ಜಿಲ್ಲೆಗೆ ಬೇಕೆ ಎಂದು ಗೃಹಸಚಿವ ಡಾ| ಜಿ. ಪರಮೇಶ್ವರ್‌ ಪ್ರಶ್ನಿಸಿದರು.

Advertisement

ಶನಿವಾರ ಕುರುಬ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶವೇ ಒಪ್ಪಿಕೊಳ್ಳುವಂತಹ ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇವರು, ಮುಂದೊಂದು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧವೇ ಶಿಕಾರಿಪುರದಲ್ಲಿ ಸ್ಪರ್ಧಿಸಿದರೂ ಆಶ್ಚರ್ಯಪಡಬೇಕಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next