Advertisement

Tumkur; ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಪರೋಕ್ಷ ವಿರೋಧ?

11:21 PM Feb 20, 2024 | Team Udayavani |

ತುಮಕೂರು: ಮಾಜಿ ಸಂಸದ ಎಸ್‌.ಪಿ ಮುದ್ದಹನುಮೇಗೌಡ ಅವರು ಫೆ.22ರಂದು ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನಿವಾಸದಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಗೌಡ ನೇತೃತ್ವದಲ್ಲಿ ಗ್ರಾಮಾಂತರ ಕಾಂಗ್ರೆಸ್‌ ಮುಖಂಡರು ಗುಪ್ತ ಸಭೆ ನಡೆಸಿದರು.

Advertisement

ಮಾಜಿ ಶಾಸಕ ಡಿ.ಸಿ. ಗೌರಿ ಶಂಕರ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಸ್‌.ಟಿ. ಶ್ರೀನಿವಾಸ್‌ ಸೇರಿದಂತೆ ಇತರೆ ಮುಖಂಡರು ಭಾಗವಹಿಸಿದ್ದರು.

ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿ ರುವ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಆಪ್ತರಾದ ಮುರಳೀಧರ್‌ ಹಾಲಪ್ಪ ಸಹಿತ ಹಲವು ಮುಖಂಡರು ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದರು.

ಈ ಹಿಂದೆ ಹಲವು ಬಾರಿ ಮುದ್ದಹನುಮೇ ಗೌಡರು ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ಧಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮಾಂತರ ಕಾಂಗ್ರೆಸ್‌ ಮುಖಂಡರ ಸಭೆ ನಡೆದಿರುವುದು ಮಹತ್ವ ಪಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next