Advertisement

ಜನತಾ ದರ್ಶನಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ಕಾರಿ ಬಸ್ ನಲ್ಲಿ ತೆರಳಿದ ಅಧಿಕಾರಿಗಳು

02:04 PM Oct 31, 2023 | Team Udayavani |

ತುಮಕೂರು: ರಾಜ್ಯದೆಲ್ಲೆಡೆ ಚಾಲ್ತಿಯಾಗಿರುವ ಅಧಿಕಾರಿಗಳ ಬಸ್ ಪ್ರಯಾಣ ಕಲ್ಪತರುನಾಡು ತುಮಕೂರಿನಲ್ಲಿಯೂ ಮುಂದುವರೆದಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮುಂದಾಳತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಜನತಾದರ್ಶನ ನಡೆಯುವ ಹುಲಿಯೂರುದುರ್ಗಕ್ಕೆ ಪ್ರಯಾಣಿಸುವ ಮೂಲಕ ಗಮನ ಸೆಳೆದರು.

Advertisement

ಕುಣಿಗಲ್ ತಾಲೂಕು ಹುಲಿಯೂರುದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಆ.31ರ ಮಂಗಳವಾರ ಏರ್ಪಡಿಸಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಜಿ.ಪಂ. ಸಿಇಓ ಜಿ. ಪ್ರಭು ಅವರೊಂದಿಗೆ ಕೆಎಸ್ಸಾರ್ಟಿಸಿ ಬಸ್‌ನಲ್ಲಿ‌ ಪ್ರಯಾಣಿಸಿದರು.

ಕಾರುಗಳನ್ನು ತೊರೆದು ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ಇತರೆ ಜಿಲ್ಲೆಯ ಅಧಿಕಾರಿಗಳಿಗೆ ತುಮಕೂರು ಜಿಲ್ಲೆಯ ಅಧಿಕಾರಿಗಳು ಮಾದರಿಯಾದರು.

ತಮ್ಮ ಗ್ರಾಮಕ್ಕೆ ಇಂದು ಸಾಲು ಸಾಲಾಗಿ ಸರ್ಕಾರಿ ಕಾರುಗಳಲ್ಲಿ ಅಧಿಕಾರಿಗಳು ಬರುತ್ತಾರೆ ಎಂದು ಎದುರು ನೋಡುತ್ತಿದ್ದ ಗ್ರಾಮಸ್ಥರು ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಬಂದಿಳಿದ ಜಿಲ್ಲಾಧಿಕಾರಿಗಳ ಸರಳತೆಯನ್ನು ಕಂಡು  ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next