Advertisement

ತುಮಕೂರು; ಪ್ರಸಾದ ಸೇವಿಸಿ ಓರ್ವ ಬಾಲಕ ಸಾವು, 20 ಮಂದಿ ಅಸ್ವಸ್ಥ

07:23 AM May 23, 2019 | Nagendra Trasi |

ತುಮಕೂರು: ಪ್ರಸಾದ ಸೇವಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇಗುಲದಲ್ಲಿ ನಡೆದಿದೆ.

Advertisement

ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಶಿರಾದಿಂದ ತೆರಳಿದ್ದ ಭಕ್ತರು ಅಲ್ಲಿಯೇ ಪ್ರಸಾದ ರೂಪದಲ್ಲಿ ಅಡುಗೆ ಮಾಡಿ ಸೇವಿಸಿದ್ದರು. ನೀರಿಲ್ಲದ ಕಾರಣ ತೊಟ್ಟಿ ನೀರನ್ನು ಬಳಸಿ ಊಟ ಮಾಡಿದ್ದ ಹಿನ್ನೆಲೆಯಲ್ಲಿ ವಾಂತಿ, ಬೇಧಿ ಆರಂಭವಾಗಿತ್ತು. ಕೂಡಲೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಏತನ್ಮಧ್ಯೆ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ವೀರಭದ್ರ(12ವರ್ಷ) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next