Advertisement

ಮಂತ್ರಾಲಯದಲ್ಲಿ ತುಂಗಾರತಿ, ಲಕ್ಷ ದೀಪೋತ್ಸವ

06:05 AM Nov 24, 2018 | Team Udayavani |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತಿಕ ಪೌರ್ಣಿಮೆ ಅಂಗವಾಗಿ ಲಕ್ಷ ದೀಪೋತ್ಸವ ಹಾಗೂ ತುಂಗಾರತಿ ಕಾರ್ಯಕ್ರಮ ಶುಕ್ರವಾರ ಸಂಜೆ ಅದ್ಧೂರಿಯಾಗಿ ನಡೆಯಿತು.

Advertisement

ರಾಘವೇಂದ್ರ ಸ್ವಾಮಿಗಳ ಮಠದ ಎದುರು ಕಾರ್ತಿಕ ಪೌರ್ಣಿಮೆ ಅಂಗವಾಗಿ ಆಯೋಜಿಸಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಮಠದ ಪೀಠಾ ಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ನಂತರ, ತುಂಗಾರತಿ ಅಂಗವಾಗಿ ತುಂಗಭದ್ರಾ ನದಿ ತೀರದಲ್ಲಿ ಪುಣ್ಯನದಿ ಆರತಿ ಕಾರ್ಯಕ್ರಮ ನೆರವೇರಿಸಿದರು. ಲಕ್ಷ ದೀಪೋತ್ಸವದ ಅಂಗವಾಗಿ ಭಕ್ತರು ದೀಪವನ್ನು ಬೆಳಗುವುದರ ಮೂಲಕ ರಾಯರಿಗೆ ಭಕ್ತಿ ಸಮರ್ಪಣೆ ಮಾಡಿದರು. ನಂತರ ಮಠದ ಪಂಡಿತರು, ಅ ಧಿಕಾರಿಗಳು, ಭಕ್ತರು ಪುಣ್ಯನದಿ ಆರತಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next