Advertisement

ಸುರಂಗ,ಮೇಲ್ಸೆತುವೆ ನಿರ್ಮಾಣಕ್ಕೆ 6 ತಿಂಗಳಲ್ಲಿ ಅನುಮತಿ: ಗಡ್ಕರಿ

06:00 AM Dec 02, 2018 | Team Udayavani |

ಹಾಸನ: ರಾಜ್ಯದ ಕರಾವಳಿಗೆ ಸಂಪರ್ಕ ಕೊಂಡಿಯಾಗಿರುವ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿ-75ರ ಶಿರಾಡಿಘಾಟಿನಲ್ಲಿ 23.63 ಕಿ.ಮೀ. ಸುರಂಗ ಮತ್ತು ಮೇಲ್ಸೆತುವೆ ನಿರ್ಮಾಣದ 10 ಸಾವಿರ ಕೋಟಿ ರೂ. ಯೋಜನೆಯ ಡಿಪಿಆರ್‌ ಅಂತಿಮ ಹಂತದಲ್ಲಿದೆ. ಇನ್ನು 6 ತಿಂಗಳಲ್ಲಿ ಈ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ.

Advertisement

ನಗರದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾವೇರಿ ವಿವಾದಕ್ಕೆ ನದಿ ಜೋಡಣೆಯೇ ಮದ್ದು. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆಯ 80 ಸಾವಿರ ಕೋಟಿ ರೂ.ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ 60 ರಿಂದ 70 ಟಿಎಂಸಿ ನೀರಿಗಾಗಿ ವಿವಾದವಿದೆ. 

ಗೋದಾವರಿಯಲ್ಲಿ 500 ಟಿಎಂಸಿಗೂ ಹೆಚ್ಚು ನೀರು ವ್ಯರ್ಥವಾಗುತ್ತಿದೆ. ಅದನ್ನು ಕಾವೇರಿ ನದಿಗೆ ಹರಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಗೋದಾವರಿಯಿಂದ ಕೃಷ್ಣಾ ನದಿಗೆ, ಕೃಷ್ಣೆಯಿಂದ ಪೆನ್ನಾರ್‌ ನದಿಗೆ, ಪೆನ್ನಾರ್‌ನಿಂದ ಕಾವೇರಿ ನದಿ ಜೋಡಣೆ ಮಾಡುವುದರಿಂದ 450 ಟಿಎಂಸಿ ನೀರು ಪಡೆದುಕೊಳ್ಳಲು ಸಾಧ್ಯವಿದೆ. ಆಗ ತಮಿಳುನಾಡಿನ ಭಾಗಕ್ಕೂ ನೀರು ಲಭ್ಯವಾಗಲಿದೆ. ಇದರಿಂದ ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಯಲಿದೆ ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next