Advertisement

ಲಾರಿ –ಕಾರು ನಡುವೆ ಭೀಕರ ರಸ್ತೆ ಅಪಘಾತ :ನವ ವಿವಾಹಿತ ಯುವಕ ಸೇರಿ ಮೂವರ ಸಾವು, ಮಹಿಳೆ ಗಂಭೀರ

10:54 PM Apr 28, 2022 | Team Udayavani |

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಚಿಕ್ಕಶೆಟ್ಟಿಕೆರೆ ಬಳಿ ಇನೋವಾ ಕಾರಿಗೆ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಮಂದಿ ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ನಡೆದಿದೆ.

Advertisement

ಮೃತರನ್ನು ಮೂಲತಃ ಅರಸೀಕೆರೆ ತಾಲ್ಲೂಕಿನ ಕಮಲಾಪುರದ ಪ್ರಸನ್ನ(28), ಕಾರು ಚಾಲಕ ಬೆಂಗಳೂರಿನ ಕೈಗೊಂಡನಹಳ್ಳಿಯ ಚೆನ್ನಯ್ಯ(32) ಹಾಗೂ ಬೆಂಗಳೂರಿನ ಕೈಗೊಂಡನಹಳ್ಳಿಯ ಸಂತೋಷ್(32) ಎಂದು ಗುರುತಿಸಲಾಗಿದೆ.

ಮೃತ ಪ್ರಸನ್ನನ ಪತ್ನಿ ಮಂದಾರ ಗಂಭೀರ ಗಾಯಗೊಂಡಿದ್ದು ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇವಲ ಹನ್ನೊಂದು ದಿನಗಳ ಹಿಂದೆಯಷ್ಟೆ ವಿವಾಹವಾಗಿದ್ದ ಪ್ರಸನ್ನ ಮತ್ತು ಪತ್ನಿ ಮಂದಾರ ಅರಸೀಕೆರೆ ತಾಲೂಕಿನ ಕಮಲಾಪುರದಿಂದ ಮನೆಗೆ ಬೇಕಾದ ವಸ್ತುಗಳನ್ನು ಕೊಂಡು ಹಾಲಿ ವಾಸವಾಗಿರುವ ಬೆಂಗಳೂರಿನ ಕೈಗೊಂಡನಹಳ್ಳಿಯ ಸರ್ಜಾಪುರಕ್ಕೆ ಇನೋವಾ ಕಾರಿನಲ್ಲಿ ತೆರಳುತ್ತಿರುವಾಗ ತಮಿಳುನಾಡಿನ ಕಡೆಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ : ಮದುವೆಗಾಗಿ ಯೋಧನ ಏರ್‌ ಲಿಫ್ಟ್ : ಗಡಿ ನಿಯಂತ್ರಣಾ ರೇಖೆ ಬಳಿ ವಿಶೇಷ ಘಟನೆ

Advertisement

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು. ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಪರಾರಿಯಾಗಿದ್ದಾನೆ.

ಸ್ಥಳೀಯರೊಂದಿಗೆ ಆಂಬುಲೆನ್ಸ್ ಮೂಲಕ ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next