Advertisement

ಚುನಾವಣಾ ಸಮರದ ಬಳಿಕ ಬಿಜೆಪಿ- ಕಾಂಗ್ರೆಸ್ ಟ್ವೀಟ್ ವಾರ್!

05:00 PM Nov 10, 2020 | keerthan |

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಆರಂಭವಾಗಿದೆ.

Advertisement

ರಾಜ್ಯ ಬಿಜೆಪಿ ಮೊದಲು ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರನ್ನು ಹಾಸ್ಯ ಮಾಡಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನ ವಿದೂಷಕ ಎಂದಿದೆ.

“ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ . . .

ಮತದಾರ: ಅಯ್ಯೋ ಸಿದ್ದರಾಮಯ್ಯನವರೇ ಇಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷವೇ ಇಲ್ಲವಲ್ಲ! “ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದಕ್ಕೆ ಉತ್ತರಿಸಿರುವ ರಾಜ್ಯ ಕಾಂಗ್ರೆಸ್, “ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ ಅಹಂ ತಲೆಗೇರಿಸಿಕೊಳ್ಳಬೇಡಿ ಎಂದು ತಿರುಗೇಟು ನೀಡಿದೆ.

Advertisement

ಇದನ್ನೂ ಓದಿ:ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ

ಇಂತಹ ಆಹಂಕಾರಗಳನ್ನ ಬಿಟ್ಟು ಕೋವಿಡ್ ನಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ, ಜಿಸ್ ಟಿ ಪಾಲು ತರಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ, ಅದರತ್ತ ಗಮನಿಸಿ. ಗಾಂಭೀರ್ಯತೆ ಅರಿಯದ ನಿಮ್ಮ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರಜ್ಞಾವಂತಿಕೆಯ ಟ್ಯೂಷನ್ ಕೊಡಿಸಿ ಟ್ವೀಟ್ ಮಾಡಿದೆ.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಕಾಂಗ್ರೆಸ್ ನ ಟಿ,ಬಿ ಜಯಚಂದ್ರ ಅವರನ್ನು ಸೋಲಿಸಿದರೆ, ಆರ್.ಆರ್. ನಗರದಲ್ಲಿ ಕಾಂಗ್ರೆಸ್ ನ ಕುಸುಮಾ ವಿರುದ್ಧ ಮುನಿರತ್ನ ಭರ್ಜರಿ ಜಯ ಸಾಧಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next