ಡಾಲಿ ಧನಂಜಯ್ ಸದ್ದಿಲ್ಲದೇ ನಟಿಸಿರುವ “ಟ್ವೆಂಟಿ ಒನ್ ಹವರ್’ ಎಂಬ ಸಿನಿಮಾವೊಂದು ಇಂದು ಬಿಡುಗಡೆಯಾಗಿದೆ. ಇದರ ನಡುವೆಯೇ ಕಿಚ್ಚ ಸುದೀಪ್ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.
ಹೌದು, ಕಿಚ್ಚ ಸುದೀಪ್ ಅವರು ಇತ್ತೀಚೆಗೆ “ಟ್ವೆಂಟಿ ಒನ್ ಹವರ್’ ಚಿತ್ರವನ್ನು ವೀಕ್ಷಿಸಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವುದು ಚಿತ್ರತಂಡದ ವಿಶ್ವಾಸ ಹೆಚ್ಚಿಸಿದೆ.
ಅಂದಹಾಗೆ, “ಟ್ವೆಂಟಿ ಒನ್ ಹವರ್’ ಕೋವಿಡ್ ಮೊದಲ ಲಾಕ್ಡೌನ್ ನಂತರ ಧನಂಜಯ್ ಅಭಿನಯಿಸಿರುವ ಸಿನಿಮಾ. ಔಟ್ ಆ್ಯಂಡ್ ಔಟ್ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಟ್ವೆಂಟಿ ಒನ್ ಹವರ್’ ಸಿನಿಮಾದಲ್ಲಿ ಧನಂಜಯ್ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಈ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಧನಂಜಯ್, “ಮಲೆಯಾಳಿ ಹುಡುಗಿಯೊಬ್ಬಳು ಬೆಂಗಳೂರಿಗೆ ಬಂದು ಕಾಣೆಯಾಗುತ್ತಾಳೆ. ಆಕೆಯ ಹುಡುಕಾಟದ ಸುತ್ತ ಈ ಸಿನಿಮಾದ ಕಥೆ ನಡೆಯುತ್ತದೆ. ಇದರಲ್ಲಿ ನಾನು ತನಿಖಾಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಕರ್ನಾಟಕ ಹಾಗೂ ಕೇರಳದಲ್ಲಿ ಸಿನಿಮಾದ ಕಥೆ ನಡೆಯುತ್ತದೆ. ಸಿನಿಮಾದ ಟೈಟಲ್ಲೇ ಹೇಳುವಂತೆ 21 ಗಂಟೆಗಳಲ್ಲಿ ಸಿನಿಮಾದ ಕಥೆ ನಡೆಯುತ್ತದೆ. ಬಹಳ ದಿನಗಳ ನಂತರ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾವೊಂದರಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗುತ್ತಿದೆ. ಒಳ್ಳೆಯ ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರ ತಂಡದಿಂದ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಆಡಿಯನ್ಸ್ಗೂ “ಟ್ವೆಂಟಿ ಒನ್ ಹವರ್’ ಸಿನಿಮಾ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸುತ್ತಾರೆ.
Related Articles
ಉಳಿದಂತೆ ದುರ್ಗಾ ಕೃಷ್ಣ, ಸುದೇವ್ ನಾಯರ್, ರಾಹುಲ್ ಮಾಧವ್ ಮೊದಲಾದವರು “ಟ್ವೆಂಟಿ ಒನ್ ಹವರ್’ ಸಿನಿ ಮಾದ ಇತರ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ
ಹಲವು ಜಾಹೀರಾತುಗಳನ್ನು ನಿರ್ದೇಶಿಸಿದ ಅನುಭವವಿರುವ ಜೈಶಂಕರ್ ಪಂಡಿತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಿರ್ಮಾಪಕರಾದ ಬಾಲಕೃಷ್ಣ ಎನ್. ಎಸ್, ಅಭಿಷೇಕ್ ರುದ್ರಮೂರ್ತಿ, ಸುನೀಲ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ರುಪರ್ಟ್ ಫರ್ನಾಂಡಿಸ್ ಸಂಗೀತ, ತಿರುನವುಕ್ಕರಸು ಛಾಯಾಗ್ರಹಣ ರಿಚರ್ಡ್ ಕೆವಿನ್ ಸಂಕಲನವಿದೆ.