Advertisement

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

12:58 AM Jun 02, 2023 | Team Udayavani |

ಪುತ್ತೂರು : ನಗರದ ಮುಖ್ಯ ರಸ್ತೆಯ ಮಾಯಿದೆ ದೇವುಸ್‌ ಚರ್ಚ್‌ ಸಮೀಪದ ಪ್ರಕಾಶ್‌ ಫೂಟ್ ವೇರ್‌ (ಚಪ್ಪಲಿ) ಅಂಗಡಿಯಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

Advertisement

ದಾವಣಗೆರೆ ದೇವರಾಜ ಅರಸ್‌ ಬಡವಾಣೆಯ ಸಮೀರ್‌ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್‌ (ಚಂದು) ಬಂಧಿತರು.

ಆರೋಪಿಗಳು ಚಪ್ಪಲಿ ಅಂಗಡಿಯಿಂದ 2022 ಸೆ. 16ರಂದು ಸುಮಾರು 15 ಲಕ್ಷ ರೂ. ಅನ್ನು ಕಳವುಗೈದು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕಾಶ್‌ ಫೂಟ್ ವೇರ್‌ ಮಳಿಗೆಯ ಮಾಲಕ ಸಮೀರ್‌ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next