Advertisement

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

01:24 PM Oct 22, 2024 | Team Udayavani |

ಕೊಳ್ಳೇಗಾಲ: ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್ ) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ನಗರ ಪೊಲೀಸ್ ಠಾಣೆಯ ಪಿ.ಎಸ್.ಐ, ವರ್ಷ ಮತ್ತು ತಂಡ ನಗರದ ಹೊಸ ಅಣಗಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ(ಅ.22) ಬಂಧಿಸಿದ್ದಾರೆ.

Advertisement

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತ. ಡಿ.ವೈ ಎಸ್ ಪಿ ಧರ್ಮೇಂದ್ರ, ಸಿಐ ಶಿವಮಾದಯ್ಯ ರವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿಯ ಮೇರೆಗೆ ಕಾದು ಕುಳಿತ ಪೊಲೀಸರು ನಗರದ ಹೊಸ ಅಣಗಳ್ಳಿ ಬಳಿ ಬರುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿದ್ದ 4 ಕೆ.ಜಿ. 386 ಗ್ರಾಂ ತಿಮಿಂಗಿಲ ವಾಂತಿ ಇರುವುದು ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೈಸೂರು ಆಶೋಕಪುರಂ ನಿವಾಸಿ ವಸಂತ ಕುಮಾರ್(50) ರಾಮನಗರ ಜಿಲ್ಲೆಯ ಕನಕಪುರ ನಿವಾಸಿ ವೈರಮುಡಿ(40) ಬಂಧಿತರು.

ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next