Advertisement

ಪಾದರಾಯನಪುರ ಗಲಭೆ ಆರೋಪಿಗಳಿಬ್ಬರಿಗೆ ಸೋಂಕು ; ರಾಮನಗರ ಜೈಲಿನಲ್ಲಿ ಹೈ ಅಲರ್ಟ್

08:05 AM Apr 24, 2020 | Hari Prasad |

ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ಮೊನ್ನೆ ನಡೆದಿದ್ದ ಗಲಭೆ ಸಂಬಂಧ ಬಂಧಿತರಾಗಿ ರಾಮನಗರ ಕಾರಾಗೃಹದಲ್ಲಿರಿಸಲಾಗಿರುವ 121 ಆರೋಪಿಗಳ ಪೈಕಿ ಇಂದು ಇಬ್ಬರಲ್ಲಿ ಕೋವಿಡ್ 19 ವೈರಸ್ ಸೋಂಕು ಪಾಸಿಟಿವ್ ವರದಿಯಾಗಿದೆ. ಇದು ಜೈಲಿನಲ್ಲಿರುವ ಖೈದಿಗಳ ಆತಂಕಕ್ಕೆ ಕಾರಣವಾಗಿದೆ.

Advertisement

ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೋವಿಡ್ 19 ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ಈ ಕಾರಣದಿಂದ ತಕ್ಷಣವೇ ಜೈಲಿನಲ್ಲಿರುವ ಇತರೇ ಗಲಭೆ ಆರೋಪಿಗಳನ್ನು ಸ್ಥಳಾಂತರಿಸದಿದ್ದರೆ ಶುಕ್ರವಾರದಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೋವಿಡ್ 19 ವೈರಸ್ ಸೋಂಕು ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ ಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ರಾಮನಗರ ಕಾರಾಗೃಹವನ್ನು ಕ್ವಾರಂಟೈನಲ್ಲಿ ಇಡಬೇಕು. ಇಲ್ಲದಿದ್ದರೆ ಶುಕ್ರವಾರದಿಂದಲೇ ಪ್ರತಿಭಟನೆ ನಡೆಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next