Advertisement

Kolhar ಬಳಿ ಕೃಷ್ಣೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

07:51 PM Apr 08, 2024 | Team Udayavani |

ಕೊಲ್ಹಾರ (ವಿಜಯಪುರ): ಯುಗಾಗಿ ಹಬ್ಬದ ನಿಮಿತ್ತ ಗ್ರಾಮದೇವಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಸ್ನಾನಕ್ಕೆ ಆಗಮಿಸಿದ್ದ ಇಬ್ಬರು ಬಾಲಕರು ನದಿಯಲ್ಲಿ ಮೃತಪಟ್ಟಿರುವ ಘಟನೆ ಸೋಮವಾರ ಜರುಗಿದೆ.

Advertisement

ಮೃತಪಟ್ಟವರನ್ನು ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಶ್ರೀಧರ ಶಿವಪ್ಪ ಮಾದರ ಉರ್ಫ್ ದೊಡ್ಡಮನಿ (10), ಯಶಸ್ವಿ ರಾಜು ಮಾದರ(13) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು ಸಹೋದರ ಸಂಬಂಧಿಗಳಾಗಿದ್ದು,ಯುಗಾದಿ ಅಮವಾಸ್ಯೆ ನಿಮಿತ್ತ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಿಂದ ಹೆತ್ತವರೊಂದಿಗೆ ಕೊಲ್ಹಾರ ಬಳಿ ಇರುವ ಕೃಷ್ಣಾ ನದಿಗೆ ಬಂದಿದ್ದರು.

ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಧ್ಯಾಹ್ನ ಬಾಲಕರಿಬ್ಬರ ಶವಗಳು ಪತ್ತೆಯಾಗಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next