Advertisement

ಒಂದೇ ಸ್ಥಳದಲ್ಲಿ ಎರಡು ಬಸ್ಸುಗಳು ಚರಂಡಿಗೆ, ಪ್ರಯಾಣಿಕರು ಪಾರು

11:53 AM Jul 02, 2019 | keerthan |

ವಿಟ್ಲ : ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳು ಸ್ಪಲ್ಪ ಅಂತರದಲ್ಲಿ ಒಂದೇ ಸ್ಥಳದಲ್ಲಿ ಚರಂಡಿಗೆ ಉರುಳಿದ ಘಟನೆ ವಿಟ್ಲ ಸಮೀಪದ ಮಿತ್ತೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಆದರೆ ಹಲವು ಪ್ರಯಾಣಿಕರು ಪಾರಾಗಿದ್ದಾರೆ.

Advertisement

ಬೆಂಗಳೂರಿನಿಂದ ನಿನ್ನೆ ರಾತ್ರಿ ಮಂಗಳೂರಿಗೆ ಹೊರಟ ಖಾಸಗಿ ಬಸ್ ಮಿತ್ತೂರು ತಿರುವಿನಲ್ಲಿ ಹಾಲಿನ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ವಾಲಿ ನಿಂತಿದೆ. ಈ ಘಟನೆ ನಡೆದು ಸ್ಪಲ್ಪ ಹೊತ್ತಿನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೊಂದು ಕೆಎಸ್ ಆರ್ ಟಿಸಿ ಐರಾವತ ಬಸ್ ಅದೇ ಸ್ಥಳದಲ್ಲಿ ಚರಂಡಿಗಿಳಿದು ವಾಲಿ ನಿಂತಿದೆ. ಬಸ್ ಚರಂಡಿಗಿಳಿರುವುದನ್ನು ನೋಡುತ್ತ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ್ದಾರೆ. ಇದರಿಂದ ಬಸ್ ಚರಂಡಿಗಿಳಿದಿದೆಯೆನ್ನಲಾಗಿದೆ.

ಘಟನೆಯಲ್ಲಿ ಎರಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ‌. ಎರಡು ಬಸ್ ಗಳು ಅಕ್ಕಪಕ್ಕದಲ್ಲಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಎರಡು ಬಸ್ಸಿನ ಮುಂಭಾಗ ಜಖಂಗೊಂಡಿದೆ. ಟೆಲಿಫೋನ್ ಕೇಬಲ್ ಗೆ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next