Advertisement

ಫ್ರಿಡ್ಜ್ ಸ್ಫೋಟಗೊಂಡು ಇಬ್ಬರು ಬಾಲಕರು ಬಲಿ; ದೇಹ ಛಿದ್ರ, ಛಿದ್ರ

06:19 PM Oct 28, 2017 | Sharanya Alva |

ವಿಜಯಪುರ: ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.

Advertisement

ಉತ್ನಾಳ ಗ್ರಾಮದ ತೋಟದ ಮನೆಯಲ್ಲಿ ಫ್ರಿಡ್ಜ್ ನಲ್ಲಿನ ಗ್ಯಾಸ್ ಸೋರಿಕೆಯಿಂದಾಗಿ ಸ್ಫೋಟಗೊಂಡಿತ್ತು. ಸಮೀಪದಲ್ಲೇ ಇದ್ದ ಸಂಜೀವ್ ಕುಮಾರ್ (11ವರ್ಷ), ಪವನ ಪ್ರಕಾಶ್ ಹೂಗಾರ್(5) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಾಲಕರ ಮೃತದೇಹಗಳು ಛಿದ್ರ, ಛಿದ್ರಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next