Advertisement

ಎರಡು ದಿನ ಮಳೆ, ಬಿಸಿ ಗಾಳಿ ಸಾಧ್ಯತೆ

11:20 PM May 13, 2019 | Team Udayavani |

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಇನ್ನೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಉತ್ತರ ಒಳನಾಡಿನಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Advertisement

ದಕ್ಷಿಣ ಒಳನಾಡಿನಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿಯ ಪ್ರಭಾವದಿಂದ ಬೆಂಗಳೂರು ಸೇರಿ ಹಲವೆಡೆ ಉತ್ತಮ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಪ್ರಮಾಣ ಹೆಚ್ಚಾಗಿದೆ. ಜತೆಗೆ ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ.

ಸೋಮವಾರ ಮೇಲ್ಮೆ ಸುಳಿಗಾಳಿಯ ಪ್ರಭಾವದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿದೆ.

ಇನ್ನೂ ಎರಡು ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಮೇಲ್ಮೆ„ಸುಳಿಗಾಳಿ ಪ್ರಭಾವ ಕಡಿಮೆಯಾದಂತೆ ಮಳೆ ಕಡಿಮೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುತ್ತಿರುವ ಪರಿಣಾಮ ವಾತಾವರಣದಲ್ಲಿ ತಾಪಮಾನ ಕಡಿಮೆಯಾಗಿದೆ.

ಆದರೆ, ಉತ್ತರ ಒಳನಾಡಿನ ಭಾಗಗಳಲ್ಲಿ ಉಷ್ಣಾಂಶ 40 ಡಿ.ಸೆ.ದಾಟಿದ್ದು, ಬಿಸಿಗಾಳಿ ಬೀಸುತ್ತಿದೆ. ಜತೆಗೆ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದಲ್ಲೂ ಉಷ್ಣಾಂಶ ಹೆಚ್ಚಾಗಿರುವುದರಿಂದ ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಹೇಳಿದರು.

Advertisement

ಸೋಮವಾರ ಚಾಮರಾಜನಗರ ಜಿಲ್ಲೆಯಲ್ಲಿ 64 ಮಿಲಿ ಮೀಟರ್‌ ಮಳೆಯಾದ ವರದಿಯಾಗಿದ್ದು, ರಾಮನಗರ 42, ಬೆಂಗಳೂರು ನಗರ 39, ತುಮಕೂರು 35, ಚಿತ್ರದುರ್ಗ 28.4, ಮೈಸೂರು 27, ಹಾಸನ 26, ಬೆಂಗಳೂರು ಗ್ರಾಮಾಂತರ 22.5, ಮಂಡ್ಯ 22 ಹಾಗೂ ಚಿಕ್ಕಮಗಳೂರು 9 ಮಿ.ಮೀ. ಮಳೆಯಾದ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next