Advertisement

ಇಂದಿನಿಂದ ಎರಡು ದಿನ ವೇಣುಗೋಪಾಲ್‌ ಪ್ರಚಾರ

11:25 PM May 11, 2019 | Lakshmi GovindaRaj |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಭಾನುವಾರದಿಂದ ಎರಡು ದಿನಗಳ ಕಾಲ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

Advertisement

ಭಾನುವಾರ ಬೆಳಗ್ಗೆ ಕೊಚ್ಚಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ, ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ, ಕುಂದಗೋಳ ವಿಧಾನಸಭಾ ಕ್ಷೇತ್ರದ ಚುನಾವಣೆ ಗೆಲ್ಲುವ ಕುರಿತು ಉಸ್ತುವಾರಿ ಮುಖಂಡರು ಹಾಗೂ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ನಂತರ, ಕುಂದಗೋಳದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಪ್ರಚಾರ ನಡೆಸಲಿದ್ದಾರೆ.

ಅಂದು ರಾತ್ರಿಯೇ ಬೆಂಗಳೂರಿಗೆ ವಾಪಸ್‌ ಬಂದು, ಸೋಮವಾರ ಬೆಳಗ್ಗೆ ಹೈದರಾಬಾದ್‌ ಮೂಲಕ ಚಿಂಚೋಳಿಗೆ ತೆರಳುವರು. ಪಕ್ಷದ ಚುನಾವಣಾ ಉಸ್ತುವಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಸುಭಾಸ್‌ ರಾಠೊಡ್‌ ಪರ ಪ್ರಚಾರ ನಡೆಸಲಿದ್ದಾರೆ. ನಂತರ, ಅಂದು ರಾತ್ರಿಯೇ ಹೈದರಾಬಾದ್‌ಗೆ ತೆರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next