Advertisement

ಬಾರ್‌ ನಲ್ಲಿ ಮದ್ಯ ಸೇವಿಸಿದ ಇಬ್ಬರು ಸಾವು; ಕೊಲೆ ಶಂಕೆ

09:16 AM May 22, 2023 | keerthan |

ಚೆನ್ನೈ: ತಮಿಳುನಾಡಿನ ತಂಜಾವೂರು ಜಿಲ್ಲೆಯ ಬಾರ್‌ ವೊಂದರಲ್ಲಿ ಮದ್ಯ ಸೇವಿಸಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಈ ವಾರದ ಆರಂಭದಲ್ಲಿ, ಕೈಗಾರಿಕಾ ಮೆಥನಾಲ್ ಸೇವಿಸಿದ ಕಾರಣದಿಂಧ 22 ಜನರು ಸಾವನ್ನಪ್ಪಿದರು. ಇದೀಗ ಈ ಘಟನೆ ನಡೆದಿದೆ.

Advertisement

ಮೃತರನ್ನು ಮೀನುಗಾರ ಕುಪ್ಪಸಾಮಿ ಮತ್ತು ಚಾಲಕ ವಿವೇಕ್ ಎಂದು ಗುರುತಿಸಲಾಗಿದೆ.

ಇಬ್ಬರ ದೇಹದಿಂದ ಸಂಗ್ರಹಿಸಿದ ಮಾದರಿಗಳ ವಿಧಿವಿಜ್ಞಾನ ವಿಶ್ಲೇಷಣೆಯು ಸೈನೈಡ್ ಇರುವಿಕೆಯನ್ನು ದೃಢಪಡಿಸಿದೆ. ಸಾರಾಯಿಯಲ್ಲಿ ಮೆಥನಾಲ್ ಇರಲಿಲ್ಲ ಎಂದು ವರದಿಯಾಗಿದೆ. ಕೈಗಾರಿಕಾ ಉದ್ದೇಶಗಳಿಗಾಗಿ ಬಳಸುವ ಮೆಥನಾಲ್ ಆಲ್ಕೋಹಾಲ್ ವಾಸನೆಯನ್ನು ಹೊಂದಿರುತ್ತದೆ.

ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಂಜಾವೂರು ಜಿಲ್ಲಾಧಿಕಾರಿ ದಿನೇಶ್ ಪೊನ್ರಾಜ್ ಆಲಿವರ್ ಹೇಳಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮೊದಲೇ ಬಾರ್ ನಲ್ಲಿ ಮದ್ಯವನ್ನು ಪೂರೈಸಲಾಗಿದೆ ಎಂದು ಆರೋಪಿಸಲಾಗಿದೆ.

Advertisement

ಇದನ್ನೂ ಓದಿ:ನಾರ್ಕೋ ಪರೀಕ್ಷೆಗೆ ಒಳಗಾಗಲು ಸಿದ್ಧ, ಆದರೆ..: Wrestlerಗಳಿಗೆ ಬ್ರಿಜ್ ಭೂಷಣ್ ಸಿಂಗ್ ಸವಾಲು

ಬಾರ್‌ ನಲ್ಲಿನ ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ನಾವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ರಾವತ್ ತಿಳಿಸಿದ್ದಾರೆ.

ಕೈಗಾರಿಕಾ ಮೆಥನಾಲ್ ಸೇವನೆಯಿಂದ ಈ ವಾರದ ಆರಂಭದಲ್ಲಿ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ 22 ಮಂದಿ ಸಾವನ್ನಪ್ಪಿದ್ದರು.

ಸುಮಾರು ನಲವತ್ತು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಎಸ್ಪಿ ಮತ್ತು ಇಬ್ಬರು ಡಿಎಸ್ಪಿಗಳು ಸೇರಿದಂತೆ ಹತ್ತು ಪೊಲೀಸ್ ಸಿಬ್ಬಂದಿಯನ್ನು ಸರ್ಕಾರವು ಅಮಾನತುಗೊಳಿಸಿದೆ. ಚೆಂಗಲ್ಪಟ್ಟು ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next