Advertisement

ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಪರಸ್ಪರ ಹಲ್ಲೆ: ಬಿಗುವಿನ ವಾತಾವರಣ

03:56 PM Oct 16, 2020 | Mithun PG |

ಶಿವಮೊಗ್ಗ: ಜಿಲ್ಲೆಯ ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಮಾತಿನ‌ ಚಕಮಕಿ ಬೆಳೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ನಡೆದಿದೆ.

Advertisement

ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ‌ ನಡೆಸಿದ್ದಾರೆಂದು ವರದಿಯಾಗಿದೆ.

ದೇವಾಲಯಕ್ಕೆ ಪೂಜೆ ಮಾಡಿಸಲು ಹೋದ ಮಂಜಯ್ಯ ಜೈನ್ ಎಂಬುವರ ಮೇಲೆ ಶೇಷಗಿರಿ ಭಟ್ಟರ ಸಹೋದರರು ಹಲ್ಲೆ ನಡೆಸಿದ್ದು, ಈ ವೇಳೆ ದೇವಾಲಯದ ಆಡಳಿತ ಕಚೇರಿಯ ಗ್ಲಾಸ್ ಗಳು, ಪೀಠೋಪಕರಣಗಳನ್ನು ಕೂಡ ಧ್ವಂಸ ಮಾಡಿದ್ದಾರೆ.  ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ಅದಾಗ್ಯೂ ಎರಡು ಬಣಗಳ ಮಾತಿನ‌ ಚಕಮಕಿ ಇನ್ನೂ ಮುಂದುವರಿದಿದೆ. ಸದ್ಯ ದೇವಾಲಯದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next