Advertisement

ಒಂದೆಡೆ ಸಾಲಮನ್ನಾಕ್ಕೆ ಪಟ್ಟು; ಬೀದರ್ ನಲ್ಲಿ ಇಬ್ಬರು ರೈತರ ಆತ್ಮಹತ್ಯೆ

05:33 PM Jul 09, 2018 | Team Udayavani |

ಬೀದರ್: ವಿಧಾನಸಭೆ ಕಲಾಪದಲ್ಲಿ ರೈತರ ಸಾಲಮನ್ನಾದ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ. ವಿಧಾನಸೌಧದ ಹೊರಗೆ ರೈತ ಸಂಘಟನೆ ಸಂಪೂರ್ಣ ಸಾಲಮನ್ನಾಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿವೆ. ಮತ್ತೊಂದೆಡೆ ಇದರ ನಡುವೆ ಬೀದರ್ ನಲ್ಲಿ ಸಾಲಬಾಧೆಯಿಂದ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ನಿವಾಸಿ ರೈತ ಪಂಡಿತ್ ಎಂಬವರು ವಿವಿಧ ಬ್ಯಾಂಕ್ ಗಳಲ್ಲಿ 3 ಲಕ್ಷ ರೂಪಾಯಿ ಸಾಲ ಮಾಡಿದ್ದು, ಸಾಲ ಕಟ್ಟಲಾಗದೆ ಮನನೊಂದು ಇಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ವಿವರಿಸಿದೆ.

ಅಲ್ಲದೇ ಬೀದರ್ ನ ಮಲ್ಲಿಕ್ ಮಿರ್ಜಾಪುರ ಎಂಬಲ್ಲಿಯೂ ರೈತ ರಾಜಾರೆಡ್ಡಿ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next