Advertisement

ವಿಧಾನಸಭಾ ಚುನಾವಣೆ ಹಿನ್ನಲೆ ಇಬ್ಬರು ಐಪಿಎಸ್‌ ಅಧಿಕಾರಿಗಳ ವರ್ಗ

08:54 PM Apr 23, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಧರ್ಮೆಂದ್ರಕುಮಾರ್‌ ಮೀನಾ ಅವರನ್ನು ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿಯಾಗಿ ಮತ್ತು ಕಲಬುರಗಿ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲ ಡಾ.ಕೆ.ಅರುಣ್‌ ಅವರನ್ನು ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಇನ್ನು ವೈಟ್‌ಫೀಲ್ಡ್‌ ಡಿಸಿಪಿಯಾಗಿದ್ದ ಗಿರೀಶ್‌ ಮತ್ತು ದಾವಣಗೆರೆ ಜಿಲ್ಲಾವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್‌ಗೆ ಯಾವುದೇ ಸ್ಥಾನ ನಿಯೋಜಿಸಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next