Advertisement

ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿ

10:48 PM Oct 09, 2019 | Team Udayavani |

ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಯಿತು. ಹೊಸನಗರದಲ್ಲಿ ರಾಜ್ಯದಲ್ಲಿಯೇ ಅಧಿಕ, 16 ಸೆಂ.ಮೀ.ಮಳೆ ಸುರಿಯಿತು.

Advertisement

ಈ ಮಧ್ಯೆ, ಹೊಸನಗರ ಸಮೀಪದ ಕೊಡಚಾದ್ರಿ ಗಿರಿಯಲ್ಲಿ ಸಿಡಿಲು ಬಡಿದು ಕೇರಳದ ಪೆರಿಮಣ್ಣ ಗ್ರಾಮದ ಜಂಶೀರ್‌ (32) ಎಂಬುವರು ಮೃತಪಟ್ಟಿದ್ದಾರೆ. ಜಂಶೀರ್‌, ಕೇರಳದ ಕಲ್ಲಿ ಕೋಟೆಯ ಖಾಸಗಿ ಕಂಪನಿಯೊಂದರಲ್ಲಿ ಕ್ಯಾರಿ ಗೈಡಿಂಗ್ಸ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಸ್ನೇಹಿತರ ಜೊತೆ ಟ್ರಕ್ಕಿಂಗ್‌ಗೆ ಬಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಹೆಬ್ರಿ ಶಿವಪುರ ಯಡೆª ನಿವಾಸಿ ಹರೀಶ್‌ ಪೂಜಾರಿ (27) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.

ಇದೇ ವೇಳೆ, ಧರ್ಮಸ್ಥಳ, ಶೃಂಗೇರಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಶಿರಾಲಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 35.1ಡಿ.ಸೆ. ಮತ್ತು ಬೀದರ್‌ನಲ್ಲಿ ಅತಿ ಕನಿಷ್ಠ 19ಡಿ.ಸೆ.ತಾಪಮಾನ ದಾಖಲಾಗಿದೆ. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next