Advertisement

ಅನಂತ್ ನಾಗ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನಾಪಡೆಗಳು

10:12 AM Feb 23, 2020 | Mithun PG |

ಜಮ್ಮು-ಕಾಶ್ಮೀರ: ಇಂದು ಮುಂಜಾನೆ ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿಯಿರುವ ಗುಂಡ್ ಬಾಬಾ ಖಲೀಲ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸೇನಾಪಡೆಗಳು ಹತ್ಯೆಗೈದಿವೆ.

Advertisement

ಪೊಲೀಸರು, ಸಿಆರ್ ಪಿಎಫ್ ಪಡೆಗಳು ಹಾಗೂ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರನೆಯಲ್ಲಿ ಲಷ್ಕರ್ ಏ ತೈಬಾ ಜೊತೆ ನಂಟು ಹೊಂದಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಮಾತ್ರವಲ್ಲದೆ ಸ್ಥಳದಲ್ಲಿದ್ದ ಏಕೆ-47, ಒಂದು ಪಿಸ್ತೂಲ್ , ಮದ್ದುಗುಂಡುಗಳು ಸೇರಿದಂತೆ ಹಲವು ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದಿದ್ದಾರೆ.

ಹತ್ಯೆಯಾದ ಭಯೋತ್ಪಾದಕರನ್ನು ನವೀದ್ ಭಟ್ , ಯಾಸಿನ್ ಭಟ್ ಎಂದು ಗುರುತಿಸಲಾಗಿದೆ.

Advertisement

ಶುಕ್ರವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ ನಡುವೆ ಚಕಮಕಿ ನಡೆದಿತ್ತು. ಶನಿವಾರ ಮುಂಜಾನೆ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next